ವಿಕಲಚೇತನ ಮಕ್ಕಳಿಗೆ ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಪ್ರವೇಶ

Digg This
Share on Myspace

ಬೆಂಗಳೂರು: ಆ. ೧೮  ಗೃಹಾಧಾರಿತ ಶಿಕ್ಷಣ ಕೇಂದ್ರಗಳಲ್ಲಿ  ವಸತಿ ಪಡೆದಿರುವ ವಿಕಲಚೇತನ ಮಕ್ಕಳನ್ನು ಶಾಲಾಧಾರಿತ ಶಿಕ್ಷಣ ಕೇಂದ್ರಕ್ಕೆ ಸೇರಿಸಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು ಪೋಷಕರಿಗೆ ತಿಳಿಸಿದ್ದಾರೆ. ಗೃಹಾಧಾರಿತ ಶಿಕ್ಷಣ ಕೇಂದ್ರದಿಂದ ಶಾಲಾಧಾರಿತ ಶಿಕ್ಷಣ ಕೇಂದ್ರಕ್ಕೆ ಸಿದ್ಧಗೊಳಿಸಲು             ೩೧ ಶಾಲಾ ಸಿದ್ಧತಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳು ವಾರದಲ್ಲಿ ಸೋಮವಾರ ಮತ್ತು ಬುಧವಾರ ಕಾರ್ಯ ನಿರ್ವಹಿಸುತ್ತವೆ. ಮಕ್ಕಳು ಕೇಂದ್ರಕ್ಕೆ ಬಂದು ಹೋಗಲು ಒಂದು ತಿಂಗಳಿಗೆ            ರೂ. ೩೦೦-೦೦ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಪೋಷಕರು ಇದರ ಪ್ರಯೋಜನ ಪಡೆದು ತಮ್ಮ ಮಕ್ಕಳನ್ನು ಶಾಲಾ ಸಿದ್ಧತಾ ಕೇಂದ್ರದ ಶಾಲೆಗೆ ದಾಖಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ಆಯಾ ವಲಯದ ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Comments are closed

FEATURED LINKS